ಜೂಜಾಟ: 8 ಮಂದಿ ಸೆರೆ, 1 ಲಕ್ಷ ರೂ. ನಗದು ಜಪ್ತಿ

Update: 2020-05-22 11:24 GMT

ಬೆಂಗಳೂರು, ಮೇ 22: ಲಾಕ್‍ಡೌನ್ ನಿಯಮ ಉಲ್ಲಂಘಿಸಿ ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪದಡಿ 8 ಮಂದಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.

ಇಲ್ಲಿನ ಚನ್ನನಾಯಕನಪಾಳ್ಯದ ಎಂಎಎಸ್ ಲೇಔಟ್‍ನಲ್ಲಿರುವ ಎಸ್‍ಕೆ ಎಂಟರ್ ಪ್ರೈಸಸ್ ಕಚೇರಿಯಲ್ಲಿ ಆರೋಪಿಗಳು ಹಣವನ್ನು ಪಣವಾಗಿ ಕಟ್ಟಿಕೊಂಡು ಅಂದರ್-ಬಾಹರ್ ಎಂಬ ಇಸ್ಪೀಟ್ ಜೂಜಾಟ ಆಡುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಬಂಧಿತರ ವಿರುದ್ಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News