ಶ್ರಮಿಕ ರೈಲಿನಲ್ಲಿ ತೆರಳುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚ ಸರಕಾರವೇ ಭರಿಸಲಿದೆ: ಸಿಎಂ ಯಡಿಯೂರಪ್ಪ

Update: 2020-05-22 16:53 GMT

ಬೆಂಗಳೂರು, ಮೇ 22: ರಾಜ್ಯದಿಂದ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರ ಪ್ರಯಾಣ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಮೇ 31ರವರೆಗೆ ಶ್ರಮಿಕ ರೈಲುಗಳ ಮೂಲಕ ಸ್ವಗ್ರಾಮಗಳಿಗೆ ತೆರಳ ಬಯಸುವ ವಲಸೆ ಕಾರ್ಮಿಕರು ಹಾಗೂ ಲಾಕ್‍ಡೌನ್‍ನಲ್ಲಿ ಸಿಲಿಕಿರುವವರ ಪ್ರಯಾಣ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ನಮ್ಮ ದೇಶದ ದೂರದ ಭಾಗಗಳಿಂದ ಬಂದಿರುವ ವಲಸೆ ಕಾರ್ಮಿಕರನ್ನು ನಾವು ನಮ್ಮದೇ ರಾಜ್ಯದ ಜನರೆಂದು ಭಾವಿಸುತ್ತೇವೆ. ಅವರ ಕಷ್ಟಕ್ಕೆ ಸ್ಪಂದಿಸಬೇಕು ಎಂಬುದು ಸರಕಾರದ ದೃಢ ನಿರ್ಧಾರ ಎಂದು ಸಿಎಂ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News