ಕೂಳೂರು: ವಿಮಾನ ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Update: 2020-05-22 16:46 GMT

ಮಂಗಳೂರು, ಮೇ 22: ಬಜಪೆ ಕೆಂಜಾರಿನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ 10 ವರ್ಷ ಕಳೆದಿದ್ದು ಈ ಹಿನ್ನೆಲೆಯಲ್ಲಿ ದುರಂತದ ವಾರ್ಷಿಕ ಸ್ಮರಣಾರ್ಥ ಮಡಿದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮವು ನಗರದ ಹೊರವಲಯದ ಕೂಳೂರು ಸೇತುವೆ ಪಕ್ಕದ ಉದ್ಯಾನವನದಲ್ಲಿ ಬೆಳಗ್ಗೆ ಜರುಗಿತು.

ದ.ಕ.ಜಿಲ್ಲಾಡಳಿತ, ನವಮಂಗಳೂರು ಬಂದರು ಮಂಡಳಿ, ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ  ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ದ.ಕ. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ಮುರಳಿ ಮೋಹನ್ ಚೂಂತಾರ್, ಮಂಗಳೂರು ವಿಮಾನ ನಿಲ್ದಾಣ ನಿರ್ದೇಶಕ ಬಿ.ವಿ ರಾವ್  ಮಂಗಳೂರು ವಿಮಾನ ದುರಂತ ಸಂತ್ರಸ್ತರ ಕುಟುಂಬಗಳ ಸಮಿತಿಯ ಅಧ್ಯಕ್ಷರು  ಮತ್ತಿತರರು ಶ್ರದ್ಧಾಂಜಲಿ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News