​ಕದ್ರಿ ಉದ್ಯಾನವನದಲ್ಲಿ ವಾಯುವಿಹಾರಕ್ಕೆ ಅವಕಾಶ

Update: 2020-05-22 17:09 GMT

ಮಂಗಳೂರು,ಮೇ 22: ಕೋವಿಡ್-19 ಮತ್ತು ಲಾಕ್‌ಡೌನ್‌ನಿಂದ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ಕದ್ರಿ ಮತ್ತು ಜಿಂಕೆ ಉದ್ಯಾನವನವು ಇದೀಗ ಸರಕಾರದ ಆದೇಶದ ಅನ್ವಯ ಸಾರ್ವಜನಿಕ ಪ್ರವೇಶಕ್ಕೆ ತೆರೆಯಲ್ಪಟ್ಟಿದೆ.

ಅದರಂತೆ ಕದ್ರಿ ಉದ್ಯಾನವನದಲ್ಲಿ ಬೆಳಗ್ಗೆ 7ರಿಂದ 9ಗಂಟೆವರೆಗೆ ಮತ್ತು ಸಂಜೆ 4ರಿಂದ 7ಗಂಟೆಯವರೆಗೆ ವಾಯುವಿಹಾರ ಮಾಡಬಹುದಾಗಿದೆ.

ಕೋವಿಡ್-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಗೂ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News