ವೇಶ್ಯಾವಾಟಿಕೆ ದಂಧೆ: ಇಬ್ಬರ ಬಂಧನ, ನಾಲ್ವರು ಯುವತಿಯರ ರಕ್ಷಣೆ

Update: 2020-05-23 11:36 GMT

ಬೆಂಗಳೂರು, ಮೇ 23: ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ಕರೆತಂದು ವೇಶ್ಯಾವಾಟಿಕೆ ದಂಧೆಗೆ ದೂಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.

ನಗರದ ನಿವಾಸಿಗಳಾದ ಶಿವಕುಮಾರ್(31), ರಂಗಸ್ವಾಮಿ(51) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು, ಹೊರರಾಜ್ಯದ ಯುವತಿಯರನ್ನು ಉದ್ಯೋಗ ಕೊಡಿಸುವ ನೆಪದಲ್ಲಿ ತಂದು ವೇಶ್ಯಾವಾಟಿಕೆ ದಂಧೆಗೆ ದೂಡಿ, ಅಕ್ರಮವಾಗಿ ಆರೋಪಿಗಳು ಹಣ ಸಂಪಾದನೆ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬಂಧಿತರಿಂದ 3 ಮೊಬೈಲ್ ಫೋನ್, 2,910 ನಗದು ವಶಪಡಿಸಿಕೊಳ್ಳಲಾಗಿದ್ದು, ಇಲ್ಲಿನ ಮಾರತ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News