ಕೊರೋನ ಔಷಧಿ ಪ್ರಯೋಗಕ್ಕೆ ನನ್ನ ದೇಹ ಬಳಸಿಕೊಳ್ಳಿ: ಪ್ರಧಾನಿಗೆ ರಾಜ್ಯದ ಯುವಕನಿಂದ ಪತ್ರ

Update: 2020-05-23 11:48 GMT
ಸಾಂದರ್ಭಿಕ ಚಿತ್ರ

ಗದಗ, ಮೇ 23: ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಇದನ್ನು ತಡೆಗಟ್ಟಲು ಯಾವುದೇ ಔಷಧಿಯನ್ನು ಇಲ್ಲಿಯವರೆಗೆ ಕಂಡು ಹಿಡಿದಿಲ್ಲ. ಆದರೆ, ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಯುವಕನೊಬ್ಬ ಕೊರೋನ ಸೋಂಕು ಔಷಧ ಪ್ರಯೋಗಕ್ಕೆ ತನ್ನ ದೇಹವನ್ನು ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾನೆ.

ಬೆಳ್ಳಟ್ಟಿ ಗ್ರಾಮದ ವಿರೇಶ್ ಕುರವತ್ತಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಯುವಕ. ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರೂ ಯಾವುದೇ ಔಷಧಿಯನ್ನು ಕಂಡು ಹಿಡಿಯಲು ಆಗಿಲ್ಲ. ಹಾಗೊಂದು ಬಾರಿ ಔಷಧಿಯನ್ನು ಕಂಡು ಹಿಡಿದರೂ ಆ ಔಷಧಿಯನ್ನು ಮನುಷ್ಯರ ಮೇಲೆ ಪ್ರಯೋಗ ಮಾಡಲಾಗುತ್ತದೆ ಎಂಬ ವಿಚಾರ ಈ ಯುವಕನ ಗಮನಕ್ಕೆ ಬಂದಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಕಲೆ ಹಾಕಿದ ವಿರೇಶ್ ಕುರವತ್ತಿ ಅವರು ಪ್ರಧಾನಿ ಅವರಿಗೆ ಪತ್ರ ಬರೆದು ಕೊರೋನ ಸೋಂಕು ನಿವಾರಕ ಔಷಧಿ ಕಂಡು ಹಿಡಿಯುವ ಪ್ರಯೋಗದಲ್ಲಿ ತನ್ನ ದೇಹವನ್ನ ಬಳಸಿಕೊಳ್ಳಲು ಮನವಿ ಮಾಡಿದ್ದಾನೆ.

ಪ್ರಧಾನ ಮಂತ್ರಿ ಕಚೇರಿಗೆ ಮನವಿ ಪತ್ರವನ್ನು ಕಳುಹಿಸಿರುವ ಯುವಕ ಯಾವುದೇ ಕ್ಷಣದಲ್ಲಾದರೂ ನನ್ನ ದೇಹವನ್ನು ಪ್ರಯೋಗಕ್ಕೆ ಉಪಯೋಗಿಸಿಕೊಳ್ಳುವಂತೆ ಮನವಿ ಪತ್ರದಲ್ಲಿ ತಿಳಿಸಿದ್ದಾನೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News