ಅಕ್ರಮ ಮರಳು ಸಾಗಾಟ; ಅಧಿಕಾರಿಗಳ ಅಮಾನತಿಗೆ ಶಿಫಾರಸ್ಸು: ಉಡುಪಿ ಡಿಸಿ

Update: 2020-05-23 12:54 GMT

ಉಡುಪಿ, ಮೇ 23: ಸ್ವರ್ಣ ನದಿಯಲ್ಲಿ ಹೂಳೆತ್ತುವ ನೆಪದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದಾರೆಂಬ ದೂರಿನ ಹಿನ್ನೆಲೆಯಲ್ಲಿ ಈಗಾಗಲೇ ಅದರ ವಿರುದ್ಧ ಕಠಿಣ ಕ್ರಮ ಜರಗಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಈ ಸಂಬಂಧ ಈಗಾಗಲೇ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸ ಲಾಗಿದೆ ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ತವ್ಯ ಲೋಪ ಎಸಗಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸರಕಾರಕ್ಕೆ ಶಿಪಾರಸ್ಸು ಮಾಡಲಾಗಿದೆ ಎಂದರು.

ಜಿಲ್ಲೆಯ ಹಲವು ಭಾಗಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಲೇ ಇದೆ. ದೂರು ಬಂದ ಕಡೆಗಳಲ್ಲಿ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಂಡಿದ್ದೇವೆ. ಆದುದರಿಂದ ಜಿಲ್ಲಾಡಳಿತ ಅಕ್ರಮವಾಗಿ ಮರಳುಗಾರಿಕೆ ಮಾಡಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News