ಕಾಸರಗೋಡು ಜಿಲ್ಲಾ ಪಂಚಾಯತ್ ನ ಪ್ರಥಮ ಅಧ್ಯಕ್ಷ ಸಿ.ಅಹ್ಮದ್ ಕುಂಞಿ ನಿಧನ

Update: 2020-05-23 15:25 GMT

ಮಂಜೇಶ್ವರ: ಕಾಸರಗೋಡು ಜಿಲ್ಲಾ ಪಂಚಾಯತ್ ನ ಪ್ರಥಮ ಅಧ್ಯಕ್ಷ ಸಿ.ಅಹ್ಮದ್ ಕುಂಞಿ ನಿಧನರಾಗಿದ್ದಾರೆ. ಅವರಿಗೆ 78 ವಯಸ್ಸಾಗಿತ್ತು. ಅವರು ಶನಿವಾರ ಸಂಜೆ ಮಂಜೇಶ್ವರ ಬೀಚ್ ರಸ್ತೆಯಲ್ಲಿರುವ ತಮ್ಮ ಸ್ವಗ್ರಹದಲ್ಲಿ ನಿಧನರಾದರು. 

1995-2000 ಸಾಲಿನಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ ನ ಪ್ರಥಮ ಅಧ್ಯಕ್ಷರಾಗಿದ್ದರು. ಮುಸ್ಲಿಂ ಲೀಗ್ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ, ಮಂಡಲ ಅಧ್ಯಕ್ಷ, ಜಿಲ್ಲಾ ಸಮಿತಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. 

ಮಂಜೇಶ್ವರ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕ, ಪಾಂಡಿಯಾಲ್ ಜಮಾಅತ್ ಅಧ್ಯಕ್ಷ, ಮಂಜೇಶ್ವರ ಯತೀಮ್ ಖಾನ ಸ್ಥಾಪಕ ಸದಸ್ಯ, ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಎರಡು ಬಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಅಲ್ಪ ಸಂಖ್ಯಾತರ ಸಮಸ್ಯೆಗಳನ್ನು ಅಧ್ಯಯನ ನಡೆಸಲು ನಿಯೋಜಿಸಿದ್ದ ಪಾಲೋಳಿ ಮುಹಮ್ಮದ್ ಕುಟ್ಟಿ ಕಮಿಷನ್ ಸಮಿತಿಯಲ್ಲಿ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರು. 

ಪತ್ನಿ, ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News