ರಾಜ್ಯದಾದ್ಯಂತ ಲಾಕ್‌ಡೌನ್: ಉತ್ತಮ ಪ್ರತಿಕ್ರಿಯೆ

Update: 2020-05-24 05:16 GMT

ಬೆಂಗಳೂರು, ಮೇ 24: ಕೊರೋನ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಭಾನುವಾರದ ಸಂಪೂರ್ಣ ಲಾಕ್‌ಡೌನ್‌ಗೆ ರಾಜ್ಯವ್ಯಾಪಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಕಡೆಯಲ್ಲಿಯೂ ಜನ ಸಂಚಾರ ಅತ್ಯಂತ ವಿರಳವಾಗಿತ್ತು.ಬೀದರ್, ಬಳ್ಳಾರಿ ಹಾಗೂ ರಾಮನಗರ ಸಂಪೂರ್ಣ ಸ್ತಬ್ದವಾಗಿತ್ತು. ಬೀದರ್‌ನಲ್ಲಿ ಬಸ್ ನಿಲ್ದಾಣಗಳು ಹಾಗೂ ರಸ್ತೆಗಳು ಬಿಕೋ ಎನ್ನುತ್ತಿವೆ.

ಪೊಲೀಸರು ಅಲ್ಲಲ್ಲಿ ಚೆಕ್‌ಪೋಸ್ಟ್ ಹಾಕಿದ್ದು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವವರನ್ನು ಎಚ್ಚರಿಸುತ್ತಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಗಳಲ್ಲಿ ವಾಹನ ಓಡಾಟ ಕಡಿಮೆಯಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News