ಚಿಕ್ಕಮಗಳೂರು: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

Update: 2020-05-24 09:15 GMT

ಚಿಕ್ಕಮಗಳೂರು, ಮೇ 24: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ ಶರಣಾಗಿರುವ ಘಟನೆ ಭಾನುವಾರ ನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.

ಕೋವಿಡ್ ಆಸ್ಪತ್ರೆಯ ಶೌಚಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 53 ವರ್ಷದ ವ್ಯಕ್ತಿಯಲ್ಲಿ ಕೆಮ್ಮು, ಶೀತ, ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲೀ ಕಳೆದ ನಾಲ್ಕು ದಿನಗಳ ಹಿಂದಿ ಕ್ವಾರಂಟೈನಲ್ಲಿ ಇರಿಸಲಾಗಿತು. ವ್ಯಕ್ತಿಯ  ಗಂಟಲು ದ್ರವ , ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ನಡುವೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News