ನಿಧನ- ಅನಿಲ್‌ ಕುಮಾರ್

Update: 2020-05-24 16:33 GMT

ಉಡುಪಿ, ಮೇ 24: ಸಾರ್ವಜನಿಕ ಗಣೇಶೋತ್ಸವ ಸಮಿತಿ ಗುಡ್ಡೆಅಂಗಡಿ ಅಲೆವೂರು ಇದರ ಉಪಾಧ್ಯಕ್ಷರಾದ ಅನಿಲ್ ಕುಮಾರ್ (56) ರವಿವಾರ ಹೃದಯಾಘಾತದಿಂದ ನಿಧನ ಹೊಂದಿದರು. ಹಿರಿಯಡಕ ಗ್ರೀನ್‌ಪಾರ್ಕ್ ಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಇವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

ತುಳುನಾಡ ದೈವಾರಾಧಕರ ಸಹಕಾರಿ ಒಕ್ಕೂಟ ಉಡುಪಿ ಜಿಲ್ಲೆ ಇದರ ಸ್ಥಾಪಕ ಅಧ್ಯಕ್ಷರಾಗಿ, ಅಲೆವೂರು ಎಜ್ಯುಕೇಶನ್ ಸೊಸೈಟಿಯ ಸಲಹೆಗಾರರಾಗಿ, ಬಿಲ್ಲವ ಒಕ್ಕೂಟ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಇವರು ಸೇವೆ ಸಲ್ಲಿಸಿದ್ದರು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ನಿರೂಪಕರಾಗಿ, ಕಲಾವಿದರಾಗಿ ಹಲವು ನಾಟಕಗಳಲ್ಲಿ ಇವರು ನಟಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ