ಈದುಲ್ ಫಿತ್ರ್: ಸಿಎಂ ಯಡಿಯೂರಪ್ಪ, ಸಿದ್ದರಾಮಯ್ಯ ಸೇರಿ ಹಲವು ಗಣ್ಯರಿಂದ ಶುಭಾಶಯ

Update: 2020-05-25 06:17 GMT

ಬೆಂಗಳೂರು, ಮೇ.25: ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಡಿಸಿಎಂ ಅಶ್ವಥ್ ನಾರಾಯಣ ಸೇರಿ ಹಲವು ಗಣ್ಯರು ಈದ್ ಶುಭಾಶಯ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಾಡಿನ ಸಮಸ್ತ ಮುಸ್ಲಿಮರಿಗೆ ಈದುಲ್ ಫಿತ್ರ್ ಹಬ್ಬದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿಗೆ ಎದುರಾಗಿರುವ ಕೋವಿಡ್ ಸಂಕಷ್ಟಗಳು ಪರಿಹಾರವಾಗಲಿ. ಎಲ್ಲರಿಗೂ ಸುಖ, ಶಾಂತಿ, ಸಮೃದ್ಧಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸೋಣ. ಎಲ್ಲರೂ ಮನೆಯೊಳಗೇ ಇದ್ದು, ಸುರಕ್ಷಿತವಾಗಿ ಹಬ್ಬವನ್ನು ಆಚರಿಸಿ ಎಂದು ಕರೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಪವಿತ್ರ ಈದುಲ್ ಫಿತ್ರ್ ಹಬ್ಬ ಸಾರುವ ಸ್ನೇಹ, ತ್ಯಾಗ ಮತ್ತು ಭಾತೃತ್ವದ ಸಂದೇಶವನ್ನು ನಾವೆಲ್ಲ ಅರಿತು ಅಳವಡಿಸಿಕೊಂಡು ಬಾಳೋಣ. ನಾಡಿನ ನನ್ನ‌ ಎಲ್ಲ ಮುಸ್ಲಿಮ್ ಬಂಧುಗಳಿಗೆ ಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮೂಲಕ ಶುಭ ಕೋರಿದ್ದಾರೆ.

ವಿಡಿಯೋ ಸಂದೇಶವನ್ನು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಎಲ್ಲಾ ಮುಸ್ಲಿಂ ಸಹೋದರ ಸಹೋದರಿಯರಿಗೆ ಈದುಲ್ ಫಿತ್ರ್ ಶುಭಾಶಯಗಳು. ಈ ಹಬ್ಬವು ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಶಾಂತಿ, ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ತರುತ್ತದೆ ಎಂದು ಭಾವಿಸುತ್ತೇನೆ ಎಂದು ಶುಭಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News