ಮೂಡುಶೆಡ್ಡೆ ಗ್ರಾಪಂ ಕಟ್ಟಡಕ್ಕೆ ಶಿಲಾನ್ಯಾಸ

Update: 2020-05-25 17:56 GMT

ಗುರುಪುರ, ಮೇ 25: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮ ಉದ್ಯೋಗ ಖಾತರಿ ಯೋಜನೆಯಡಿ 18 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿ ರುವ ಮೂಡುಶೆಡ್ಡೆ ಗ್ರಾಪಂನ ನೂತನ ಕಟ್ಟಡ ಕಾಮಗಾರಿಗೆ ಸೋಮವಾರ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸಗೈದರು.

ಈ ಸಂದರ್ಭ ಮೂಡುಶೆಡ್ಡೆ ಗ್ರಾಪಂ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷೆ ಶಾಂಭವಿ, ತಾಪಂ ಸದಸ್ಯೆ ಕವಿತಾ ಡಿ, ಪಿಡಿಒ ಜಯಪ್ರಕಾಶ್ ಕೆ, ಉಮೇಶ್ ಜೆ, ಹರೀಶ್ ಮೂಡುಶೆಡ್ಡೆ, ಕೃಷಿಕ ರಮಾನಾಥ ಅತ್ತರ್ ಮತ್ತಿತರರು ಉಪಸ್ಥಿತರಿದ್ದರು.

ಬಜ್ಪೆತಂಗುದಾಣ ಕಾಮಗಾರಿಗೆ ಶಿಲಾನ್ಯಾಸ

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಬಿಡುಗಡೆಗೊಳಿಸಿರುವ 40 ಲಕ್ಷ ರೂ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಬಜ್ಪೆಬಸ್ ತಂಗುದಾಣದ ಆವರಣ ಕಾಂಕ್ರಿಟೀಕರಣ ಕಾಮಗಾರಿಗೆ ಸೋಮವಾರ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಸದಸ್ಯೆ ವಸಂತಿ ಕೊಶೋರ್, ತಾಪಂ ಸದಸ್ಯೆ ಉಷಾ ಸುವರ್ಣ, ಬಜ್ಪೆ ಗ್ರಾಪಂ ಅಧ್ಯಕ್ಷೆ ರೋಝಿ ಮಥಾಯಿಸ್, ಜಿಪಂ ಮಾಜಿ ಉಪಾಧ್ಯಕ್ಷ ರಿತೇಶ್ ಶೆಟ್ಟಿ, ಬಜ್ಪೆ ಶಕ್ತಿ ಕೇಂದ್ರದ ಅಧ್ಯಕ್ಷ ಲೋಕೇಶ್ ಪೂಜಾರಿ, ಸುಧಾಕರ ಕಾಮತ್, ಜೋಕಿಂ ಡಿ’ಕಾಸ್ತ, ಪ್ರದೀಪ್ ಬಜ್ಪೆ, ಸುಮಾ ಶೆಟ್ಟಿ, ಬಜ್ಪೆ ಗ್ರಾಪಂ ಪಿಡಿಒ ಸಾಯೀಶ್ ಚೌಟ ಮತ್ತಿತರರು ಉಪಸ್ಥಿತರಿದ್ದರು.

ಪೆರ್ಮುದೆ : ರಾಜೀವ್ ಗಾಂಧಿ ಸೇವಾ ಕೇಂದ್ರ ಉದ್ಘಾಟನೆ

ಪೆರ್ಮುದೆ ಗ್ರಾಪಂನಲ್ಲಿ ಹೊಸದಾಗಿ ನಿರ್ಮಾಣಗೊಂಡ ಭಾರತ್ ನಿರ್ಮಾಣ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಸೋಮವಾರ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು. ಈ ಸಂದರ್ಭ ಜಿಪಂ ಸದಸ್ಯೆ ವಸಂತಿ ಕಿಶೋರ್, ತಾಪಂ ಸದಸ್ಯೆ ಶಶಿಕಲಾ ಶೆಟ್ಟಿ, ಪೆರ್ಮುದೆ ಗ್ರಾಪಂ ಅಧ್ಯಕ್ಷೆ ಸರೋಜಾ, ಉಪಾಧ್ಯಕ್ಷ ಕಿಶೋರ್ ಪೆರ್ಮುದೆ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News