ಟಿಪ್ಪರ್-ಬೈಕ್ ಮುಖಾಮುಖಿ ಢಿಕ್ಕಿ; ತಾತ - ಮೊಮ್ಮಗ ಮೃತ್ಯು

Update: 2020-05-25 18:31 GMT

ಚಿಕ್ಕಮಗಳೂರು, ಮೇ 25: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‍ನಲ್ಲಿದ್ದ ತಾತ ಹಾಗೂ ಮೊಮ್ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನಲ್ಲಿ ಸೋಮವಾರ ವರದಿಯಾಗಿದೆ.

ಮೃತರನ್ನು ಕಡೂರು ತಾಲೂಕಿನ ಬಳಿಗನೂರು ಗ್ರಾಮದ ಮಲ್ಲಪ್ಪ(57) ಹಾಗೂ ಅವರ ಮೊಮ್ಮಗ ಉತ್ಸವ್(12) ಎಂದು ಗುರುತಿಸಲಾಗಿದ್ದು, ಬಳಿಗನೂರು ಗ್ರಾಮದಿಂದ ಬೀರೂರು ಕಡೆ ಬೈಕ್‍ನಲ್ಲಿ ಬರುತ್ತಿದ್ದ ಮಲ್ಲಪ್ಪ ಹಾಗೂ ಅವರ ಮೊಮ್ಮಗ ಉತ್ಸವ್ ಬೀರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಟಿಪ್ಪರ್ ಲಾರಿ ಬೈಕ್‍ಗೆ ಢಿಕ್ಕಿಯಾಗಿ ರಸ್ತೆ ಬದಿಯ ಮರವೊಂದಕ್ಕೆ ಗುದ್ದಿದೆ. ಈ ವೇಳೆ ಬೈಕ್‍ನಲ್ಲಿದ್ದ ತಾತ ಮೊಮ್ಮಗ ಇಬ್ಬರೂ ಲಾರಿಯಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯಲ್ಲಿದ್ದ ಚಾಲಕ ಹಾಗೂ ನಿರ್ವಾಹಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News