ಉಡುಪಿ: ಒಳಚರಂಡಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ
Update: 2020-05-26 15:08 GMT
ಉಡುಪಿ, ಮೇ 26: ಉಡುಪಿ ನಗರಸಭಾ ವ್ಯಾಪ್ತಿಯ ಸಂತೆಕಟ್ಟೆ ಹಾಗೂ ಮಣಿಪಾಲದ ಒಳಚರಂಡಿ ಕಾಮಗಾರಿ ಮತ್ತು ಈಗ ಇರುವ ಒಳ ಚರಂಡಿಯ ನವೀಕರಣದ ಬಗ್ಗೆ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಂಗಳೂರು ಇಲ್ಲಿನ ಅಧಿಕಾರಿಗಳು ಹಾಗೂ ಉಡುಪಿ ನಗರಸಭಾ ಆಯುಕ್ತ ರೊಂದಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಇಂದು ಶಾಸಕರ ಕಚೇರಿಯಲ್ಲಿ ಚರ್ಚೆ ನಡೆಸಿದರು.
ಪ್ರಸ್ತಾವಿತ ಕಾಮಗಾರಿ ಪ್ರದೇಶದ ಜಂಟಿ ಸಮೀಕ್ಷೆಯನ್ನು ನಡೆಸಿ ವರದಿ ಯನ್ನು ಪಡೆದುಕೊಳ್ಳಬೇಕು. ಸಮೀಕ್ಷೆಯ ನಂತರ ಅಂದಾಜು ಪಟ್ಟಿ ತಯಾರಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಾಸಕು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಂಗಳೂರು ಇದರ ಕಾರ್ಯಪಾಲಕ ಅಭಿಯಂತರ ಎಸ್.ಆರ್. ಯಲಬಳ್ಳಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಸಂಶುದ್ದೀನ್ ಮತ್ತು ನಗರಸಭೆ ಪೌರಾಯುಕ್ತ ಆನಂದ್ ಸಿ.ಕಲ್ಲೋಲಿಕರ್ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ಮೋಹನ್ ರಾಜ್ ಮೊದಲಾದ ಅಧಿಕಾರಿಗಳು ಉಪಸ್ಥಿತರಿದ್ದರು.