ಕೊರೋನ ವೈರಸ್ : ದ.ಕ. ಜಿಲ್ಲೆಯಲ್ಲಿ 417 ವರದಿ ನೆಗೆಟಿವ್
ಮಂಗಳೂರು, ಮೇ 26: ಕೊರೋನ ವೈರಸ್ ರೋಗಕ್ಕೆ ಸಂಬಂಧಿಸಿ ಮಂಗಳವಾರ ಪ್ರಯೋಗಾಲಯದಿಂದ ಸ್ವೀಕರಿಸಲಾದ 417 ವರದಿಗಳೆಲ್ಲವೂ ನೆಗೆಟಿವ್ ಆಗಿದೆ. ಇನ್ನೂ 698 ಮಂದಿಯ ವರದಿ ಬರಲು ಬಾಕಿ ಇದೆ.
ಮಂಗಳವಾರ 505 ಮಂದಿಯ ಗಂಟಲಿನ ದ್ರವವನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಅಲ್ಲದೆ 23 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ. ಇದರೊಂದಿಗೆ ಈವರೆಗೆ 42,101 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಜ್ವರ ಕ್ಲಿನಿಕ್ಗಳಲ್ಲಿ 4,201ಮಂದಿ ಮತ್ತು ಸಂಚಾರ ಕ್ಲಿನಿಕ್ನಲ್ಲಿ 232 ಮಂದಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಸುರತ್ಕಲ್ನ ಎನ್ಐಟಿಕೆಯಲ್ಲಿ 47 ಮತ್ತು ಕದ್ರಿಯ ಇಎಸ್ಐ ಆಸ್ಪತ್ರೆಯಲ್ಲಿ 27 ಮಂದಿ ಕ್ವಾರಂಟೈನ್ನಲ್ಲಿದ್ದಾರೆ.
ಈವರೆಗೆ 7,530 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 6,459 ಮಂದಿಯ ವರದಿಯನ್ನು ಸ್ವೀಕರಿಸಲಾ ಗಿದ್ದು, ಅದರಲ್ಲಿ 6,389 ಮಂದಿಯ ವರದಿಯು ನೆಗೆಟಿವ್ ಮತ್ತು 70 ಮಂದಿಯ ವರದಿಯು ಪಾಸಿಟಿವ್ ಬಂದಿದೆ.
ಈವರೆಗೆ ಪತ್ತೆಯಾದ 70 ಪಾಸಿಟಿವ್ಗಳ ಪೈಕಿ 26 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರೆ 37 ಮಂದಿ ಕೋವಿಡ್-ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎ.19ರಂದು ಮಹಿಳೆ ಮತ್ತು ಎ.23 ಹಾಗೂ ಎ.30ರಂದು ಇಬ್ಬರು ವೃದ್ಧೆಯರು, ಮೇ 13ರಂದು ಮಹಿಳೆ, ಮೇ 14ರಂದು ವೃದ್ಧೆ ಸಹಿತ ಒಟ್ಟು ಐದು ಮಂದಿ ಮೃತಪಟ್ಟಿದ್ದಾರೆ.
ಮೇ 21ರಂದು 55 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಗಂಟಲ ದ್ರವದ ಪರೀಕ್ಷೆಯಲ್ಲಿ ಕೊರೋನ ಪಾಸಿಟಿವ್ ಪಾಸಿಟಿವ್ ಕಂಡು ಬಂದಿತ್ತು. ಪಿತ್ತಕೋಶದ ಸಮಸ್ಯೆಯಿಂದ ತೀವ್ರ ಅಸ್ವಸ್ಥಗೊಂಡು ವೆನ್ಲಾಕ್ ಆಸ್ಪತ್ರೆಗೆ ಶನಿವಾರ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಅಂದು ರಾತ್ರಿಯೇ ಸಾವಿಗೀಡಾಗಿದ್ದರು. ಆ ಬಳಿಕ ಬಂದ ಅವರ ಗಂಟಲಿನ ದ್ರವದ ಮಾದರಿಯ ವರದಿಯಲ್ಲಿ ಕೊರೋನ ಪಾಸಿಟಿವ್ ಕಂಡು ಬಂದಿತ್ತು. ಹಾಗಾಗಿ ಜಿಲ್ಲೆಯಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ.