ದರೋಡೆಗೆ ಸಂಚು ರೂಪಿಸಿದ್ದ ಐವರ ಬಂಧನ

Update: 2020-05-26 17:07 GMT

ಬೆಂಗಳೂರು, ಮೇ 26: ನಗರದಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಐವರು ಖದೀಮರನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ನಗರದ ಅಲ್ಲಾಳಸಂದ್ರ ಕೆರೆ ಬಳಿ ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಸಜ್ಜಾಗಿದ್ದ ನಾಗರಾಜ, ಶ್ರೇಯಸ್, ನಂದನ್, ಪ್ರೇಮ್‍ಕುಮಾರ್ ಹಾಗೂ ಕೆವಿನ್ ತಂಡವನ್ನು ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಘಟನೆ ಸಂಬಂಧ ಯಲಹಂಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News