ನೂತನ ವರ್ಗಾವಣೆ ನೀತಿ ರೂಪುಗೊಳ್ಳುವವರೆಗೂ ಪ್ರಸ್ತುತ ಸ್ಥಳದಲ್ಲೆ ಮುಂದುವರೆಸಲು ಶಿಕ್ಷಕರಿಗೆ ಸೂಚನೆ

Update: 2020-05-26 17:51 GMT

ಬೆಂಗಳೂರು, ಮೇ 26: ನೂತನ ಶಿಕ್ಷಕರ ವರ್ಗಾವಣಾ ನಿಯಂತ್ರಣ ಕಾಯ್ದೆಯ ನಿಯಮಗಳು ರೂಪುಗೊಳ್ಳುತ್ತಿದ್ದು, ಈ ನಿಯಮಗಳ ಆಧಾರದಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಬೇಕಾಗಿದೆ. 

ರಾಜ್ಯದ ವಿವಿಧ ಸರಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರನ್ನು ಹಾಗೆಯೆ ಈ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ವರ್ಗಾವಣೆಗೊಳಗಾದ ಮತ್ತು ವರ್ಗಾವಣೆ ಹಿನ್ನೆಲೆಯಲ್ಲಿ ಸೇವೆಯಿಂದ ಬಿಡುಗಡೆ ಹೊಂದದಿರುವ ಶಿಕ್ಷಕರನ್ನು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೆ ಮುಂದಿನ ಆದೇಶದವರೆಗೆ ಮುಂದುವರೆಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸೂಚಿಸಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News