ಗಡಿಯಲ್ಲಿ ಮುಂದುವರಿದ ಉದ್ವಿಗ್ನತೆ: ಅಜಿತ್ ದೋವಲ್, ಬಿಪಿನ್ ರಾವತ್ ಜೊತೆ ಪ್ರಧಾನಿ ಮಾತುಕತೆ

Update: 2020-05-26 18:31 GMT

ಹೊಸದಿಲ್ಲಿ: ಗಡಿ ಪ್ರದೇಶದಲ್ಲಿ ಚೀನಾ ಸಮಸ್ಯೆ ಸೃಷ್ಟಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಜೊತೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದಾರೆ ನಡೆಸಿದ್ದಾರೆ ಎಂದು ವರದಿ ಮಾಡಿದೆ.

ಇದಕ್ಕೂ ಮೊದಲು ಪ್ರಧಾನಿ ವಿದೇಶಾಂಗ ಕಾರ್ಯದರ್ಶಿಯವರ ಜೊತೆ ಮಾತುಕತೆ ನಡೆಸಿದ್ದರು. ಸಿಕ್ಕಿಂ ಮತ್ತು ಲಡಾಖ್ ನಲ್ಲಿ ಭಾರತೀಯ ಮತ್ತು ಚೀನಿ ಸೈನಿಕರ ನಡುವೆ ನಡೆಯುತ್ತಿರುವ ಮಾತಿನ ಚಕಮಕಿಯ ಹಿನ್ನೆಲೆಯಲ್ಲಿ ಈ ಮಾತುಕತೆ ಮಹತ್ವದ್ದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News