ನೆಹರೂ ಪುಣ್ಯತಿಥಿ: ಮುಖ್ಯಮಂತ್ರಿಯಿಂದ ಪುಷ್ಪ ನಮನ
Update: 2020-05-27 06:36 GMT
ಬೆಂಗಳೂರು, ಮೇ 27: ಮಾಜಿ ಪ್ರಧಾನಿ ದಿ. ಪಂಡಿತ್ ಜವಾಹರ್ ಲಾಲ್ ನೆಹರೂ ಅವರ 56ನೇ ಪುಣ್ಯತಿಥಿಯ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನ ಸೌಧದ ಆವರಣದಲ್ಲಿರುವ ನೆಹರೂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಉಪಸ್ಥಿತರಿದ್ದರು.