ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಸೇವೆ ಮುಂದುವರಿಸಿ: ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಸೂಚನೆ

Update: 2020-05-27 13:15 GMT

ಬೆಂಗಳೂರು, ಮೇ 27: ನೂತನ ಶಿಕ್ಷಕರ ವರ್ಗಾವಣಾ ನಿಯಂತ್ರಣ ಕಾಯ್ದೆಯ ನಿಯಮಗಳು ರೂಪುಗೊಳ್ಳುತ್ತಿರುವುದರಿಂದ ರಾಜ್ಯದ ವಿವಿಧ ಸರಕಾರಿ ಶಾಲೆಗಳಲ್ಲಿ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮುಂದಿನ ಆದೇಶದವರೆಗೂ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಸೇವೆಯನ್ನು ಮುಂದುವರಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ನೂತನ ವರ್ಗಾವಣೆ ಕಾಯ್ದೆಯ ನಿಯಮಗಳ ಆಧಾರದಲ್ಲಿ ಪ್ರಸಕ್ತ ಸಾಲಿನ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟಿಸಬೇಕಾಗಿದೆ. ಆದ್ದರಿಂದ ನಿಯೋಜನೆ ಮೇರೆಗೆ ಕಾರ್ಯನಿರ್ವಹಿಸುತ್ತಿರುವ, ಪ್ರಸಕ್ತ ಸಾಲಿನಲ್ಲಿ ಕಡ್ಡಾಯವಾಗಿ ವರ್ಗಾವಣೆಗೊಳಗಾದ ಮತ್ತು ವರ್ಗಾವಣೆ ಹಿನ್ನಲೆಯಲ್ಲಿ ಸೇವೆಯಿಂದ ಬಿಡುಗಡೆ ಹೊಂದದಿರುವ ಶಿಕ್ಷಕರು ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲೇ ಮುಂದಿನ ಆದೇಶದವರೆಗೆ ತಮ್ಮ ಸೇವೆ ಮುಂದುವರೆಸಬೇಕು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News