ನಬಾರ್ಡ್ ಅಧ್ಯಕ್ಷರಾಗಿ ಜಿ.ಆರ್.ಚಿಂತಲ ಅಧಿಕಾರ ಸ್ವೀಕಾರ

Update: 2020-05-27 17:19 GMT

ಬೆಂಗಳೂರು, ಮೇ 27: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ದಿ ಬ್ಯಾಂಕ್(ನಬಾರ್ಡ್)ನ ಅಧ್ಯಕ್ಷರಾಗಿ ಜಿ.ಆರ್.ಚಿಂತಲ ಬೆಂಗಳೂರಿನಲ್ಲಿರುವ ನಬಾರ್ಡ್‍ನ ಕೇಂದ್ರ ಕಚೇರಿಯಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದರು.

ದೇಶದ ಪ್ರತಿಷ್ಠಿತ ಇಂಡಿಯನ್ ಅಗ್ರಿಕಲ್ಚರ್ ರೀಸರ್ಚ್ ಇನ್‍ಸ್ಟಿಟ್ಯೂಟ್‍ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು, ನಬಾರ್ಡ್ ಕೇಂದ್ರ ಕಚೇರಿಯಲ್ಲಿ ಹಲವಾರು ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಅನುಭವವನ್ನು ಹೊಂದಿದ್ದಾರೆ. ಹೈದರಾಬಾದ್‍ನ ಅಗ್ರಿ-ಬ್ಯುಸಿನೆಸ್ ಫೈನಾನ್ಸ್ ಲಿ. ಉಪಾಧ್ಯಕ್ಷರಾಗಿ, ಲಕ್ನೋದಲ್ಲಿರುವ ಗ್ರಾಮೀಣಾಭಿವೃದ್ದಿ ಬ್ಯಾಂಕರ್ಸ್ ಸಂಸ್ಥೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News