ನಾಯಕತ್ವ ಬದಲಾವಣೆ ಇಲ್ಲ, ಸರಕಾರ ಸುಭದ್ರ: ಬಿ.ಸಿ.ಪಾಟೀಲ್

Update: 2020-05-29 10:39 GMT

ಬೆಂಗಳೂರು, ಮೇ 29: ರಾಜ್ಯ ಸರಕಾರದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಸರಕಾರ ಸುಭದ್ರವಾಗಿದೆ. ಬಿ.ಎಸ್.ಯಡಿಯೂರಪ್ಪಸಮರ್ಥ ಮುಖ್ಯಮಂತ್ರಿಯಾಗಿ ನೆರೆ ಕೊರೋನದಂತಹ ಎಲ್ಲ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಇನ್ನೂ ಮೂರು ವರ್ಷ ಬಿಜೆಪಿ ಸರಕಾರ ಸುಭದ್ರವಾಗಿರಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಉಮೇಶ್ ಕತ್ತಿ ನೇತೃತ್ವದಲ್ಲಿ ಕೆಲವು ಬಿಜೆಪಿ ಶಾಸಕರು ಸಭೆ ಸೇರಿರುವ ಬಗ್ಗೆ ವಿಕಾಸ ಸೌಧದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಷ್ಟು ದಿನ ಲಾಕ್ಡೌನ್ ಇದ್ದ ಕಾರಣ ಹೊಟೇಲ್ ಗಳೆಲ್ಲ ಮುಚ್ಚಿವೆ. ಹೀಗಾಗಿ ಆತ್ಮೀಯರ ಮನೆಯಲ್ಲಿ ಔತಣಕ್ಕೆ ಸೇರುವುದು ಸಭೆ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚರ್ಚಿಸಲು ಅವಕಾಶವಿದೆ. ರಾಜ್ಯಸಭೆ ವಿಧಾನ ಪರಿಷತ್ ಚುನಾವಣೆಗಳು ಬರುತ್ತಿರುವುದರಿಂದ ಈ ಬಗ್ಗೆ ಸಹಜವಾಗಿ ಚರ್ಚಿಸಿರಬಹುದಷ್ಟೆ ಎಂದು ಬಿ.ಸಿ.ಪಾಟೀಲ್ ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News