ಮೂವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

Update: 2020-05-29 14:49 GMT

ಬೆಂಗಳೂರು, ಮೇ 29: ಕೆಎಎಸ್ ಹಿರಿಯ ಶ್ರೇಣಿಯ ಮೂವರು ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತದ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮೆಹಬೂಬ ಸಾಬ್-ನಿರ್ದೇಶಕರು ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಬೆಂಗಳೂರು, ಸಿದ್ದೇಶ್ವರ್ ಎನ್.-ಸರಕಾರದ ಉಪ ಕಾರ್ಯದರ್ಶಿ ನಗರಾಭಿವೃದ್ಧಿ ಇಲಾಖೆ ಸಚಿವಾಲಯ ವಿಕಾಸಸೌಧ ಬೆಂಗಳೂರು ಹಾಗೂ ಪ್ರಶಾಂತ ಕುಮಾರ್ ಎಸ್.ಬಿ.-ಪ್ರಧಾನ ಕಾರ್ಯದರ್ಶಿ ಕರ್ನಾಟಕ ಜಮೀನುಗಳ ನಿಗಮ ನಿಯಮಿತ ಬೆಂಗಳೂರು ಇಲ್ಲಿಗೆ ನಿಯೋಜನೆಗೊಳ್ಳುವಂತೆ ಸೂಚಿಸಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News