ಉಡುಪಿ ಜಿಪಂ ಸಿಬ್ಬಂದಿಯ ಮೂರನೆ ವರದಿ ನೆಗೆಟಿವ್: ಆಸ್ಪತ್ರೆಯಿಂದ ಬಿಡುಗಡೆ

Update: 2020-05-29 15:54 GMT

ಕಾಪು, ಮೇ 29: ಉಡುಪಿ ಜಿಪಂ ಸ್ವಚ್ಛತಾ ಅಭಿಯಾನ ವಿಭಾಗದ ಸಿಬ್ಬಂದಿ, ಕಟಪಾಡಿ ಸರಕಾರಿಗುಡ್ಡೆಯ 30ರ ಹರೆಯದ ಯುವಕನ ಮೇ 27ರಂದು ಮಣಿಪಾಲ ಪ್ರಯೋಗಾಲಯಕ್ಕೆ ಕಳುಹಿಸಲಾದ ಗಂಟಲು ದ್ರವದ ಪರೀಕ್ಷೆಯ ವರದಿಯು ನೆಗೆಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಮೇ 24ರಂದು ಮಂಗಳೂರು ಪ್ರಯೋಗಾಲಯದಿಂದ ಇವರ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದರೆ ಮೇ 26ರಂದು ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಟ್ರೂನಟ್ ಯಂತ್ರದ ಮೂಲಕ ಮತ್ತೊಮ್ಮೆ ನಡೆಸಿದ ಪರೀಕ್ಷೆಯಲ್ಲಿ ನೆಗೆಟಿವ್ ಎಂಬುದಾಗಿ ವರದಿ ಬಂದಿತ್ತು. ಹೀಗೆ ವರದಿಯಲ್ಲಿನ ತಾಂತ್ರಿಕ ಗೊಂದಲದ ಕಾರಣಕ್ಕಾಗಿ ಇವರ ಗಂಟಲು ದ್ರವವನ್ನು ಮೇ 27ರಂದು ಮತ್ತೊಮ್ಮೆ ಮಣಿಪಾಲ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಮೇ 28ರಂದು ಈ ವರದಿ ನೆಗೆಟಿವ್ ಎಂಬುದಾಗಿ ಬಂದಿದೆ. ಆದುದರಿಂದ ಉದ್ಯಾವರ ಎಸ್‌ಡಿಎಂ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ದಾಖಲಾ ಗಿದ್ದ ಯುವಕನನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿ ಮನೆಗೆ ಕಳುಹಿಸಲಾಗಿದೆ ಎಂದು ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News