ಊರಿಗೆ ಹೊರಟಿದ್ದ ವಲಸೆ ಕಾರ್ಮಿಕ ಬೈಕ್ ಅಪಘಾತಕ್ಕೆ ಬಲಿ

Update: 2020-05-29 15:55 GMT

ಗಂಗೊಳ್ಳಿ, ಮೇ 29: ಬೈಕಿನಲ್ಲಿ ಊರಿಗೆ ಹೊರಟಿದ್ದ ವಲಸೆ ಕಾರ್ಮಿಕ ರೊಬ್ಬರು ಅಪಘಾತಕ್ಕೆ ಬಲಿಯಾಗಿರುವ ಘಟನೆ ಮೇ 28ರಂದು ರಾತ್ರಿ  ಮರವಂತೆ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತರನ್ನು ಹಾವೇರಿ ಜಿಲ್ಲೆಯ ಹಾನಗಲ್ಲು ತಾಲೂಕಿನ ಕೊಪ್ಪರಸಿಕೊಪ್ಪ ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ದೂರ ಸಂಬಂಧಿ ಈರಪ್ಪ ಕೆಂಗಪ್ಪಬಸಾಪುರ ಎಂಬವರೊಂದಿಗೆ ಕಟಪಾಡಿಯಿಂ ದ ಹಾವೇರಿ ಜಿಲ್ಲೆಗೆ ಹೊರಟಿದ್ದರು.

ಮಾರ್ಗ ಮಧ್ಯೆ ಹಿಂದಿನಿಂದ ಬಂದ ಲಾರಿಯು ಬೈಕಿಗೆ ಢಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾಯಿತು. ಅಪಘಾತದಿಂದ ಬೈಕ್ ಮಗುಚಿ ಬಿದ್ದ ಪರಿಣಾಮ ಇಬ್ಬರು ಸವಾರರು ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರ ವಾಗಿ ಗಾಯಗೊಂಡ ಸುರೇಶ್ ಸ್ಥಳದಲ್ಲಿಯೇ ಮೃತಪಟ್ಟರು. ತೀವ್ರವಾಗಿ ಗಾಯಗೊಂಡಿರುವ ಸಹಸವಾರ ಈರಪ್ಪ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News