ಬಾಲಕನ ಮೇಲೆ ಹಲ್ಲೆ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ಆಗ್ರಹ
Update: 2020-05-30 06:47 GMT
ಮಂಗಳೂರು, ಮೇ 30: ವಿಟ್ಲದ ಕೊಳ್ನಾಡು ಗ್ರಾಮದ ಕಾಡುಮಠ ಶಾಲೆಯ ಮೈದಾನದಲ್ಲಿ ಬಾಲಕನೋರ್ವನಿಗೆ ತೀವ್ರವಾಗಿ ಥಳಿಸಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸಿದ ದುಷ್ಕರ್ಮಿ ದಿನೇಶ್ ಹಾಗೂ ಇತರ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಮಾಅತೆ ಇಸ್ಲಾಮಿ ಹಿಂದ್, ದ.ಕ. ಜಿಲ್ಲಾ ಸಂಚಾಲಕ ಸಯೀದ್ ಇಸ್ಮಾಯೀಲ್ ಆಗ್ರಹಿಸಿದ್ದಾರೆ.
ಈ ಹಲ್ಲೆಯ ಹಿಂದೆ ಜಿಲ್ಲೆಯಲ್ಲಿ ಶಾಂತಿ ಕದಡುವ ಹುನ್ನಾರ ಕಂಡುಬರುತ್ತಿದೆ. ದೇಶವು ಸಂದಿಗ್ಧ ಘಟ್ಟದಲ್ಲಿರುವ ಇಂತಹ ಸಂದರ್ಭದಲ್ಲಿ, ಈ ರೀತಿಯ ಅಹಿತಕರ ಘಟನೆಗಳು ಸಮಾಜದ ಸ್ವಾಸ್ಥವನ್ನು ಕೆಡಿಸಿ ಇನ್ನಷ್ಟು ಅಶಾಂತಿಗೆ ಕಾರಣ ವಾಗುವ ಸಾಧ್ಯತೆ ಇದೆ. ಆದ್ದರಿಂದ ಈ ದುಷ್ಕೃತ್ಯ ಎಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದವರು ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.