ಜುಲೈ 8ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ಸಚಿವ ಸುರೇಶ್ ಕುಮಾರ್

Update: 2020-05-30 14:31 GMT

ಬೆಂಗಳೂರು, ಮೇ 30: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜುಲೈ 8ರಂದು ಘೋಷಣೆ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಆರಂಭವಾಗಿದೆ. ಕೇವಲ ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಉಳಿದಿದ್ದು, ಜೂನ್ 18ರಂದು ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.

ಯಾವುದೇ ಕಾರಣದಿಂದಾಗಿ ದ್ವಿತೀಯ ಪಿಯುಸಿ ಅಥವಾ ಎಸೆಸೆಲ್ಸಿ ಪರೀಕ್ಷೆ ಬರೆಯಲು ಸಾಧ್ಯವಾಗದೆ ಇರುವಂತಹ ವಿದ್ಯಾರ್ಥಿಗಳಿಗೆ ಜುಲೈ ಮತ್ತು ಅಗಸ್ಟ್ ನಲ್ಲಿ ಮರುಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News