ಜಮ್ಮು-ಕಾಶ್ಮೀರ:ಇಬ್ಬರು ಭಯೋತ್ಪಾದಕರ ಹತ್ಯೆ

Update: 2020-05-30 16:25 GMT
ಸಾಂದರ್ಭಿಕ ಚಿತ್ರ

ಶ್ರೀನಗರ,ಮೇ 30: ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ವನಪೋರ ಪ್ರದೇಶದಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟಿದ್ದಾರೆ.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಲಭಿಸಿದ ಬಳಿಕ ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸಿದ್ದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಕೈಗೊಂಡಿದ್ದವು. ಈ ವೇಳೆ ಭಯೋತ್ಪಾದಕರು ತಮ್ಮತ್ತ ಗುಂಡುಗಳನ್ನು ಹಾರಿಸಿದಾಗ ಭದ್ರತಾ ಪಡೆಗಳು ಪ್ರತಿದಾಳಿಯನ್ನು ನಡೆಸಿದ್ದು,ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.

ಹತ ಭಯೋತ್ಪಾದಕರ ಗುರುತು ಮತ್ತು ಅವರು ಯಾವ ಗುಂಪಿಗೆ ಸೇರಿದ್ದರು ಎನ್ನುವುದನ್ನು ತಿಳಿದುಕೊಳ್ಳಲು ತನಿಖೆ ನಡೆಯುತ್ತಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News