ಡಿಕೆಶಿ ಪದಗ್ರಹಣ ಕಾರ್ಯಕ್ರಮ ಯಶಸ್ವಿಗೆ ಸಲೀಂ ಅಹ್ಮದ್ ಕರೆ

Update: 2020-05-30 17:20 GMT

ಮಂಗಳೂರು, ಮೇ 30: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮವು ಜೂ.7ರಂದು ನಡೆಯಲಿದ್ದು, ಅದನ್ನು ಯಶಸ್ವಿಗೊಳಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕರೆ ನೀಡಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾ ಕಾಂಗ್ರೆಸ್‌ನ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಘಟಕದ ಅಧ್ಯಕ್ಷರು, ಜಿಪಂ, ತಾಪಂ ಮತ್ತು ಮಹಾನಗರ ಪಾಲಿಕೆ ಸದಸ್ಯರು ಹಾಗೂ ಸ್ಥಳೀಯ ಸಂಸ್ಥೆಯ ವಿಜೇತ ಅಭ್ಯರ್ಥಿಗಳು ಮತ್ತು ಪಕ್ಷದ ನಾಯಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪದಗ್ರಹಣ ಸಮಾರಂಭದ ಯಶಸ್ವಿಗಾಗಿ ಪ್ರತೀ ಬ್ಲಾಕ್ ಮಟ್ಟದಲ್ಲಿ ನಡೆಯುವಂತೆ ಜವಾಬ್ದಾರಿ ವಹಿಸಿಕೊಳ್ಳುವುದು ಮತ್ತು ಪಕ್ಷದ ನಾಯಕರು ಒಟ್ಟಾಗಿ ಸಂಘಟನೆಗೆ ಶ್ರಮಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಕಾರ್ಯಪ್ರವ್ರತ್ತರಾಗಬೇಕು ಎಂದು ಸಲೀಂ ಅಹ್ಮದ್ ಹೇಳಿದರು.

ಮಾಜಿ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕರಾದ ಜೆ.ಆರ್.ಲೋಬೋ, ಶಕುಂತಳಾ ಶಟ್ಟಿ, ಮೊಯ್ದಿನ್ ಬಾವಾ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಭೆಯಲ್ಲಿ ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹೀಂ, ಮಾಜಿ ಶಾಸಕ ಅಭಯಚಂದ್ರ ಜೈನ್, ಪಕ್ಷದ ಮುಖಂಡರಾದ ಜಿ.ಎ.ಬಾವಾ , ಮಂಜುನಾಥ ಭಂಡಾರಿ , ಕೋಡಿಜಾಲ್ ಇಬ್ರಾಹೀಂ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಕೋಶಾಧಿಕಾರಿ ಶಶಿಧರ್ ಹೆಗ್ಡೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News