ಬೆಂಗಳೂರು: ಕೊವೀಡ್ ಗೆದ್ದ ಪೊಲೀಸ್ ಪೇದೆಗೆ ಅಭಿನಂದನೆಗಳ ಮಹಾಪೂರ

Update: 2020-05-30 17:53 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.30: ಕೊರೋನ ಸೋಂಕಿನಿಂದ ಗುಣಮುಖರಾಗಿ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಗೊಂಡು ಪುಲಿಕೇಶಿನಗರ ಸಂಚಾರ ಪೊಲೀಸ್ ಪೇದೆ ಗುರುಸ್ವಾಮಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ.

ಶನಿವಾರ ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆ ಮುಂಭಾಗ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಸೇರಿದಂತೆ ಹಲವು ಪೊಲೀಸರು ಜಮಾವಣೆಗೊಂಡು, ಪೊಲೀಸ್ ಬ್ಯಾಂಡ್ ಮೂಲಕ ಗುರುಸ್ವಾಮಿ ಅವರನ್ನು ಸ್ವಾಗತ ಕೋರಿದರು.

ಇಲ್ಲಿನ ಪುಲಿಕೇಶಿನಗರ ಸಂಚಾರ ಪೊಲೀಸ್ ಠಾಣೆಯ ಪೇದೆ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಗುರುಸ್ವಾಮಿ ಅವರಿಗೆ ಇತ್ತೀಚಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರೀಗ ಗುಣಮುಖರಾಗಿದ್ದು, ವೈದ್ಯರ ಸೂಚನೆಯಂತೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News