ಕುಂದಾಪುರ: ಕೊರೋನ ಮುಕ್ತರಾದ 3 ಮಕ್ಕಳು ಸಹಿತ 14 ಮಂದಿ ಆಸ್ಪತ್ರೆಯಿಂದ ಬಿಡುಗಡೆ

Update: 2020-05-31 09:44 GMT

ಕುಂದಾಪುರ, ಮೇ 31: ಕುಂದಾಪುರ ಸರಕಾರಿ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 14 ಮಂದಿ ಕೊರೋನ ಸೋಂಕಿತರು ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕುಂದಾಪುರ ಸಹಾಯಕ ಆಯುಕ್ತ ರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ ಚಂದ್ರ ಸೂಡಾ, ತಾಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರಾರ್ಬಟ್ ರೆಬೆಲ್ಲೊ ಕೊರೋನ ಮುಕ್ತರಾದ ಇವರಿಗೆ ಗುಲಾಬಿ ಗಿಡಗಳನ್ನು ವಿತರಿಸುವ ಮೂಲಕ ವಿಶೇಷ ರೀತಿಯಲ್ಲಿ ಬೀಳ್ಕೋಟ್ಟರು.

ಈ ಆಸ್ಪತ್ರೆಯಲ್ಲಿ ಒಟ್ಟು 78 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ ಏಳನೆ ದಿನಕ್ಕೆ 3 ವರ್ಷ, 8 ವರ್ಷ ಮತ್ತು 14ವರ್ಷದ ಮಕ್ಕಳು ಸಹಿತ ಒಟ್ಟು 14 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಅವರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಇವರಲ್ಲಿ ಬಹುತೇಕ ಮಂದಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸಿದವರು ಮತ್ತು ಸೋಂಕಿನ ಯಾವುದೇ ಲಕ್ಷ್ಮಣಗಳಿಲ್ಲದವರಾಗಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News