ಮೂವರು ಐಎಎಸ್ ಅಧಿಕಾರಿಗಳ ನಿವೃತ್ತಿ: ಅಕ್ರಂ ಪಾಷಾಗೆ ಕಾರ್ಮಿಕ ಇಲಾಖೆ ಆಯುಕ್ತ ಹುದ್ದೆಯ ಹೆಚ್ಚುವರಿ ಹೊಣೆ

Update: 2020-05-31 18:22 GMT

ಬೆಂಗಳೂರು, ಮೇ 31: ಐಎಎಸ್ ಅಧಿಕಾರಿಗಳಾದ ಆರ್.ಆರ್.ಜನ್ನು, ಎಂ.ಕೆ.ಶ್ರೀಕಂಠಯ್ಯ ಹಾಗೂ ಕೆ.ಜಿ.ಶಾಂತಾರಾಮ್ ಅವರು ನಿವೃತ್ತಿ ಹೊಂದಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಗಳಿಗೆ ಮೂವರು ಅಧಿಕಾರಿಗಳನ್ನು ನೇಮಿಸಿ ಅವರಿಗೆ ಹೆಚ್ಚುವರಿ ಹೊಣೆ ವಹಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 

ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಯಲಯದ ಆಯುಕ್ತ ಅಕ್ರಂ ಪಾಷಾ ಅವರಿಗೆ ಕಾರ್ಮಿಕ ಇಲಾಖೆ ಆಯುಕ್ತ ಹುದ್ದೆಯ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ. ಕೆಪಿಟಿಸಿಎಲ್‌ನ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್.ಮಂಜುಳಾ ಅವರಿಗೆ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೊಣೆ ವಹಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕ ಆರ್.ರಾಮಚಂದ್ರನ್ ಅವರಿಗೆ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿಯ ಯೋಜನಾ ನಿರ್ದೇಶಕ ಹುದ್ದೆ ನೀಡಲಾಗಿದೆ.

ನಿವೃತ್ತ ಅಧಿಕಾರಿ ಶ್ರೀಕಂಠಯ್ಯ ಹೆಚ್ಚುವರಿಯಾಗಿ ಹೊಂದಿದ್ದ ಸರ್ವೇ, ಸೆಟ್ಲಮೆಂಟ್ ಹಾಗೂ ಭೂ ದಾಖಲೆಗಳ ಇಲಾಖೆ ಹೊಣೆಯನ್ನು ಮುಂದ್ರಾಕ ಇಲಾಖೆ ಆಯುಕ್ತ ಕೆ.ಪಿ.ಮೋಹನ್‌ರಾಜ್ ಅವರಿಗೆ ವಹಿಸಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News