ಉಜಿರೆ : ವಿದ್ಯುತ್ ಆಘಾತಕ್ಕೆ ಯುವಕ ಬಲಿ

Update: 2020-06-01 17:00 GMT

ಬೆಳ್ತಂಗಡಿ: ಉಜಿರೆ ಸಮೀಪ ಅತ್ತಾಜೆ ನಿವಾಸಿ, ಉಜಿರೆಯಲ್ಲಿ ಎಸಿ ಮೆಕ್ಯಾನಿಕ್ ಮಳಿಗೆ ನಡೆಸುತ್ತಿದ್ದ ಮುಹಮ್ಮದ್ ಸಿರಾಜುದ್ದೀನ್ ಅವರು ಇಂದು ರಾತ್ರಿ ವಿದ್ಯುತ್ ಉಪಕರಣದ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಆಘಾತದಿಂದ ಮೃತಪಟ್ಟಿದ್ದಾರೆ.

ಕಕ್ಕಿಂಜೆಯ ಸಂಬಂಧಿಕರ ಮನೆಯಲ್ಲಿ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಈ ಅವಘಡ ಸಂಭವಿಸಿರುವುದಾಗಿ ತಿಳಿದುಬಂದಿದೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆ ಮತ್ತು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಗಿತ್ತಾದರೂ ಅದಾಗಲೇ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. 

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News