ಲಾಕ್‌ಡೌನ್ ಸಮಯದಲ್ಲಿ ಬದಲಾವಣೆ : ದ.ಕ. ಜಿಲ್ಲಾಧಿಕಾರಿ

Update: 2020-06-01 17:21 GMT

ಮಂಗಳೂರು, ಜೂ.1: ಕೊರೋನ ವೈರಸ್ ತಡೆಗೆ ಜಾರಿಗೊಳಿಸಲಾದ ಲಾಕ್‌ಡೌನ್‌ನ ಸಮಯದಲ್ಲಿ ಬದಲಾವಣೆಗೊಳಿಸಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 7ರವರೆಗೆ ನಿಗದಿಯಾಗಿದ್ದ ಲಾಕ್‌ಡೌನ್ ಸಡಿಲಿಕೆ ನಿಯಮವನ್ನು ಬೆಳಗ್ಗೆ 5 ರಿಂದ ರಾತ್ರಿ 9ರವರೆಗೆ ವಿಸ್ತರಿಸಿದ್ದಾರೆ.

ಸರಕಾರದ ಪರಿಷ್ಕೃತ ಆದೇಶದಂತೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ರವರೆಗೆ ವ್ಯಕ್ತಿಗಳ ಚಲನವಲನವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸುರಕ್ಷಿತ ಅಂತರ ಕಡ್ಡಾಯವಾಗಿದ್ದು, ಅಂಗಡಿಗಳಲ್ಲಿ ಗ್ರಾಹಕರು ದೈಹಿಕ ಅಂತರ ಖಚಿತಪಡಿಸಿಕೊಳ್ಳುವುದು. ಒಂದು ಸಮಯದಲ್ಲಿ ಐದಕ್ಕಿಂತ ಹೆಚ್ಚು ಮಂದಿಯನ್ನು ಅನುಮತಿಸಬಾರದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News