ಬಜ್ಪೆಯ ಯುವಕನ ಕೊಲೆ ಪ್ರಕರಣ: ಐವರು ಆರೋಪಿಗಳ ಬಂಧನ

Update: 2020-06-02 08:19 GMT

ಮಂಗಳೂರು, ಜೂ.1: ಬಜ್ಪೆ ಸಮೀಪದ ದೇವರಗುಡ್ಡೆ ಎಂಬಲ್ಲಿ ಮೇ 31ರಂದು ರಾತ್ರಿ ನಡೆದ ಕರಂಬಾರು ನಿವಾಸಿ ಕೀರ್ತನ್(20) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಜ್ಪೆ ಠಾಣಾ ಪೊಲೀಸರು ಮತ್ತು ಮಂಗಳೂರು ಉತ್ತರ ಉಪ ವಿಭಾಗದ ರೌಡಿ ನಿಗ್ರಹ ದಳದವರು ಬಂಧಿಸಿದ್ದಾರೆ.

ದೀಪೇಶ್, ಸುಹಾಸ್ ಶೆಟ್ಟಿ, ಪ್ರಶಾಂತ್ ಯಾನೆ ಪಚ್ಚು, ಮೋಕ್ಷಿತ್ ಮತ್ತು ಧನರಾಜ್ ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಮಾರಕಾಯುಧಗಳು ಮತ್ತು ವಾಹನಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೇ 31ರಂದು ರಾತ್ರಿ ದೇವರಗುಡ್ಡೆಯಲ್ಲಿ ಎರಡು ತಂಡಗಳ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ನಡೆದ ಹೊಡೆದಾಟದಲ್ಲಿ ಕೀರ್ತನ್ (20) ಕೊಲೆಯಾಗಿದ್ದರೆ, ನಿತಿನ್ ಪೂಜಾರಿ(20) ಹಾಗೂ ಮಣೇಶ್ (20) ಗಾಯಗೊಂಡಿದ್ದರು.

ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಕೊಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಿದ್ದು, ಉಳಿದವರ ಬಂಧನಕ್ಕಾಗಿ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News