ಕೊರೋನ: ಜಿಲ್ಲೆಯಲ್ಲಿ 13 ಮಂದಿ ಗುಣಮುಖ

Update: 2020-06-02 17:53 GMT

ಮಂಗಳೂರು, ಜೂ.2: ಕೊರೋನ ಸೋಂಕು ತಗುಲಿ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿ ಗುಣಮುಖರಾಗಿ ಬಿಡುಗಡೆ ಗೊಂಡಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರ ಯಾವುದೇ ಕೊರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ.

ಈ ಪೈಕಿ 40 ವರ್ಷದ ಮಹಿಳೆ ಕೊರೋನ ಸೋಂಕಿನ ಜತೆಗೆ ಮೂತ್ರದ ತೊಂದರೆ, ಮಧುಮೇಹದಿಂದ ಬಳಲುತ್ತಿದ್ದರು. ತೀವ್ರ ನಾಜೂಕಿನ ಆರೋಗ್ಯದ ಪರಿಸ್ಥಿತಿಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News