ಮಂಗಳೂರು: ವ್ಯಕ್ತಿ ನಾಪತ್ತೆ

Update: 2020-06-03 17:55 GMT

ಮಂಗಳೂರು, ಜೂ.3: ಬಜಾಲ್‌ನಲ್ಲಿ ವಾಸವಿದ್ದ ವ್ಯಕ್ತಿ ನಾಪತ್ತೆಯಾದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜಾಲ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಮೇಶ್ವರ ಸಹಾನಿ (45) ಅವರು ಮೇ 21ರಂದು ಮನೆಯಿಂದ ಹೊರ ಹೋದವರು ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ.

ಗೋದಿ ಮೈ ಬಣ್ಣ, 5.5 ಅಡಿ ಎತ್ತರ, ಸಾಧಾರಣ ಶರೀರ, ಕೋಲು ಮುಖ, ಬಿಳಿ ಬಣ್ಣದ ಶರ್ಟ್, ಬೂದು ಬಣ್ಣದ ಪ್ಯಾಂಟ್ ಧರಿಸಿದ್ದರು. ಹಿಂದಿ, ಬೋಜಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಿದವರು 0824-2220529 ಗೆ ಸಂಪರ್ಕಿಲು ಕಂಕನಾಡಿ ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News