ಕೊರೋನ ಸೋಂಕಿನಿಂದ ಕಾರವಾರ ಮೂಲದ ವ್ಯಕ್ತಿ ಕುವೈತ್ ನಲ್ಲಿ ಮೃತ್ಯು

Update: 2020-06-03 18:03 GMT

ಕಾರವಾರ,ಜೂ.3: ಕೊರೋನ ಸೋಂಕಿನಿಂದ ಕಾರವಾರ ಮೂಲದ ವ್ಯಕ್ತಿಯೊಬ್ಬರು ಕುವೈತ್ ನಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಾರವಾರ ತಾಲೂಕಿನ ಸದಾಶಿವಡ ಮೂಲದ ಸುಶಾಂತ ಕಡವಾಡಕರ್ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಸುಶಾಂತ ಕುವೈತ್ ಹೊಟೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. 

ಅವರಿಗೆ ಮೇ 24 ರಂದು ಜ್ವರ ಕಾಣಿಸಿಕೊಂಡಿತ್ತು. ಮೇ.27 ರಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ನಂತರ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದಲೇ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News