ಕರ್ನಾಟಕ ಪ್ರವೇಶಿಸಿದ ಮುಂಗಾರು: ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ
Update: 2020-06-04 10:43 GMT
ಮಂಗಳೂರು, ಜೂ.4: ವಾಡಿಕೆಯಂತೆ ಜೂನ್ 1ರಂದು ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ಮಳೆ ಇಂದು ಕರ್ನಾಟಕಕ್ಕೆ ಪ್ರವೇಶವಾಗಿದೆ. ಮಧ್ಯಾಹ್ನದ ವೇಳೆಗೆ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದು, ಸದ್ಯ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಕೇರಳಕ್ಕೆ ಪ್ರವೇಶಗೊಂಡ ಒಂದೆರಡು ದಿನಗಳಲ್ಲಿ ಕರ್ನಾಟಕ ಕರಾವಳಿಗೆ ಮುಂಗಾರು ಪ್ರವೇಶವಾಗುತ್ತದೆ. ಆದರೆ ಕಳೆದ ಎರಡು ದಿನಗಳಿಂದ ಕೇರಳದಲ್ಲಿ ಮುಂಗಾರು ದುರ್ಬಲಗೊಂಡ ಹಿನ್ನೆಲೆಯಲ್ಲಿ ಕರ್ನಾಟಕಕ್ಕೂ ಮುಂಗಾರು ಪ್ರವೇಶ ಇನ್ನೂ ಕೆಲ ದಿನಗಳ ವಿಳಂಬವಾಗುವ ಬಗ್ಗೆ ಹವಾಮಾನ ಇಲಾಖೆ ಅಭಿಪ್ರಾಯಿಸಿತ್ತು.
ಆದರೆ ಇಂದು ಮಧ್ಯಾಹ್ನ ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿರುವ ಕಾರಣ, ದ.ಕ., ಉಡುಪಿ, ಕೊಡಗು ಹಾಗೂ ಉತ್ತರ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಜೂನ್ 7ರಿಂದ 9ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರುಣ ಮಿತ್ರ ವಿಭಾಗದ ಅಕಾರಿಗಳು ಮಾಹಿತಿ ನೀಡಿದ್ದಾರೆ.