ಜೂ.5: ವಿಶ್ವ ಪರಿಸರ ದಿನಾಚರಣೆ

Update: 2020-06-04 12:12 GMT

ಉಡುಪಿ, ಜೂ.3: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ವಕೀಲರ ಸಂಘ ಉಡುಪಿ, ಅರಣ್ಯ ಇಲಾಖೆ ಉಡುಪಿ ವಲಯ, ತೋಟಗಾರಿಕಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡಮೂಲಿಕೆ/ಔಷಧೀಯ ಸಸಿ ನೆಡುವ ಮತ್ತು ವಿತರಣಾ ಕಾರ್ಯಕ್ರಮ ಜೂ.5ರ ಶುಕ್ರವಾರ ಬೆಳಗ್ಗೆ 9:30ಕ್ಕೆ ಜಿಲ್ಲಾ ನ್ಯಾಯಾಲಯದ ಅವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಸಿ ವಿತರಣೆ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬ್ರಹ್ಮಾವರದ ಜಯಂಟ್ಸ್ ಗ್ರೂಪ್, ಸಾಮಾಜಿಕ ಅರಣ್ಯ ಇಲಾಖೆ, ಸುವರ್ಣ ಎಂಟರ್ ಪ್ರೈಸಸ್ ಇವರ ಸಹಯೋಗದೊಂದಿಗೆ ಜೂ.6ರಂದು ಬೆಳಗ್ಗೆ 9:30ರಿಂದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರದಲ್ಲಿ ವಿವಿಧ ತಳಿಗಳ ಸಸಿಗಳನ್ನು ಉಚಿತವಾಗಿ ವಿತರಿಸಲಾಗುವುದು. ಆಸಕ್ತ ಜನೌಷಧಿ ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News