ಆಟೊ, ಟ್ಯಾಕ್ಸಿ ಚಾಲಕರಿಗೆ ಪರಿಹಾರ: ​ಅರ್ಜಿ ಸಲ್ಲಿಸಲು ಅವಲಾಶ

Update: 2020-06-04 13:08 GMT

ಮಂಗಳೂರು, ಜೂ.4: ಕೊರೋನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ವತಿಯಿಂದ ಆಟೊ, ಟ್ಯಾಕ್ಸಿ ಚಾಲಕರಿಗೆ ಪರಿಹಾರ ನಿಧಿ 5,000 ರೂ. ಸಹಾಯಧನ ಪಡೆಯಲು ಪಡೆಯಲು ಅಲ್ಪಸಂಖ್ಯಾತ ಮತ್ತು ವಕ್ಫ್ ಇಲಾಖೆಯ ಮಾಹಿತಿ ಕೇಂದ್ರ (ಝಿನತ್ ಬಕ್ಷ್ ಕೇಂದ್ರ ಜುಮ್ಮಾ ಮಸೀದಿ ಬಂದರ್ ಮಂಗಳೂರು)ವನ್ನು ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಆರ್‌ಸಿ, ಡ್ರೈವಿಂಗ್ ಲೈಸನ್ಸ್, ಆಧಾರ್ ಕಾರ್ಡ್ (ಬ್ಯಾಂಕ್ ಖಾತೆಯೊಂದಿಗೆ ಜೋಡಣೆಯಾಗಿರಬೇಕು) ಬ್ಯಾಡ್ಜ್ ನಂಬರ್ ಇತ್ಯಾದಿ ದಾಖಲೆಯನ್ನು ಹೊಂದಿರಬೇಕು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News