ಬೀದಿಬದಿ ವ್ಯಾಪಾರಸ್ಥರ ತೆರವು ಕಾರ್ಯಾಚರಣೆಗೆ ಎಸ್ಡಿಟಿಯು ವಿರೋಧ
Update: 2020-06-04 13:10 GMT
ಮಂಗಳೂರು, ಜೂ.4: ಕೊರೋನ ಲಾಕ್ಡೌನ್ ವಿಚಾರದಲ್ಲಿ ಜನ ಸಾಮಾನ್ಯರ ಬದುಕು ತತ್ತರಿಸಿದ ನಡುವೆಯೇ ಮಂಗಳೂರು ಮಹಾನಗರ ಪಾಲಿಕೆಯು ಜೂ.5ರಂದು ಬೀದಿಬದಿ ವ್ಯಾಪಾರಸ್ಥರನ್ನು ಬಲವಂತದಿಂದ ತೆರವುಗೊಳಿಸುವ ಟೈಗರ್ ಕಾರ್ಯಾಚರಣೆ ಸಲ್ಲದು ಎಂದು ಸೋಷಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಸ್ಡಿಟಿಯು) ದಕ ಜಿಲ್ಲಾ ಸಮಿತಿ ವಿರೋಧ ವ್ಯಕ್ತಪಡಿಸಿದೆ.
ಹೊಟ್ಟೆ ಪಾಡಿಗಾಗಿ ವ್ಯಾಪಾರ ನಡೆಸಿಕೊಂಡು ಬದುಕು ಸಾಗಿಸುವ ಬೀದಿಬದಿ ವ್ಯಾಪಾರಿಗಳಿಗೆ ಪಾಲಿಕೆ ಪರ್ಯಾಯ ವ್ಯವಸ್ಥೆ ಮಾಡದೆ ಅವರ ಮೇಲೆ ಬಲಪ್ರಯೋಗ ನಡೆಸಿ ದಮನಿಸಲು ಹೊರಟಿರುವ ಪಾಲಿಕೆಯ ನಿರ್ಧಾರ ಒಪ್ಪುವಂತಹದ್ದಲ್ಲ. ವ್ಯಾಪಾರಸ್ಥರಿಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಎಸ್ಡಿಟಿಯು ಜಿಲ್ಲಾ ಉಪಾಧ್ಯಕ್ಷ ಸುಲೈಮಾನ್ ಉಸ್ತಾದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.