ರಾಜ್ಯದಲ್ಲಿ ಮತ್ತೆ ಮರುಕಳಿಸಿದ ಚಿರತೆ ದಾಳಿ: ಬಾಲಕಿಯ ಸ್ಥಿತಿ ಗಂಭೀರ
Update: 2020-06-04 13:53 GMT
ತುಮಕೂರು, ಜೂ.4: ಬಾಲಕಿಯ ಮೇಲೆ ಚಿರತೆ ದಾಳಿ ಮಾಡಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ತರೇದಕುಪ್ಪೆ ಗ್ರಾಮದಲ್ಲಿ ನಡೆದಿದೆ.
ತರೇದಕುಪ್ಪೆ ಗ್ರಾಮದ ನಾಗರಾಜು ಎಂಬವರ ಮಗಳು ರೇಖಾ (6) ಚಿರತೆ ದಾಳಿಗೊಳಗಾಗಿದ್ದು, ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ಸಂಜೆ 4.30ರ ವೇಳೆಗೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಚಿರತೆ ದಾಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.