ಕೋವಿಡ್-19ನಿಂದ ನಷ್ಠ: ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಪರಿಹಾರ

Update: 2020-06-04 16:08 GMT

ಉಡುಪಿ, ಜೂ.4: ಕೋವಿಡ್-19ರ ಕಾರಣ ದೇಶದಲ್ಲಿ ವಿಧಿಸಿರುವ ಲಾಕ್ ಡೌನ್‌ನಿಂದ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಹೆಕ್ಟೇರ್‌ಗೆ 15,000 ರೂ.ಪರಿಹಾರವನ್ನು ಗರಿಷ್ಠ ಒಂದು ಹೆಕ್ಟೇರ್ ವಿಸ್ತೀರ್ಣಕ್ಕೆ ಘೋಷಿಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಯಲ್ಲಿ ಬಾಳೆ, ಅನಾನಸ್ಸು, ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳಿಗೆ ಪರಿಹಾರ ನೀಡಲು ಅವಕಾಶ ಕಲ್ಲಿಸಲಾಗಿದೆ.

ಅನಾನಸ್ಸು ಬೆಳೆಗೆ ಸಂಬಂಧಿಸಿದಂತೆ 2019-20 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಯ ಅನುಗುಣವಾಗಿ ಪರಿಹಾರವನ್ನು ವಿತರಿಸ ಲಾಗುವುದು. ಇದಕ್ಕೆ ಆಯ್ಕೆಯಾಗುವ ರೈತರ ಪಟ್ಟಿಯನ್ನು ತೋಟಗಾರಿಕೆ ಇಲಾಖೆಯ ತಾಲೂಕು ಕಛೇರಿ, ತಹಶೀಲ್ದಾರರ ಕಚೇರಿ, ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಿಸಿದ ಗಾ್ರಪಂಗಳಲ್ಲಿ ಪ್ರಕಟಿಸಲಾಗುವುದು.

ಅದರಂತೆ ಉಡುಪಿ ಜಿಲ್ಲೆಯಲ್ಲಿ ಬಾಳೆ, ಅನಾನಸ್ಸು, ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳಿಗೆ ಪರಿಹಾರ ನೀಡಲು ಅವಕಾಶ ಕಲ್ಲಿಸಲಾಗಿದೆ. ಅನಾನಸ್ಸು ಬೆಳೆಗೆ ಸಂಬಂಧಿಸಿದಂತೆ 2019-20 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆ ಸಮೀಕ್ಷೆಯ ಅನುಗುಣವಾಗಿ ಪರಿಹಾರವನ್ನು ವಿತರಿಸಲಾಗುವುದು. ಇದಕ್ಕೆ ಆಯ್ಕೆಯಾಗುವ ರೈತರ ಪಟ್ಟಿಯನ್ನು ತೋಟಗಾರಿಕೆ ಇಲಾಖೆಯ ತಾಲೂಕು ಕಛೇರಿ, ತಹಶೀಲ್ದಾರರ ಕಚೇರಿ, ರೈತ ಸಂಪರ್ಕ ಕೇಂದ್ರ ಹಾಗೂ ಸಂಬಂಧಿಸಿದ ಗ್ರಾಪಂಗಳಲ್ಲಿ ಪ್ರಕಟಿಸಲಾಗುವುದು. ಕೋವಿಡ್-19ನಿಂದಾಗಿ ವಿಧಿಸಿರುವ ಲಾಕ್‌ಡೌನ್‌ನಿಂದಾಗಿ ಇದೇ ಮಾರ್ಚ್ ತಿಂಗಳ ಕೊನೆಯ ವಾರದಿಂದ ಮೇ ತಿಂಗಳವರೆಗೆ ಬಾಳೆ (ಅಂತರ ಬೆಳೆ ಹಾಗೂ ಕೈತೋಟ ಬೆಳೆ ಹೊರತುಪಡಿಸಿ ವಾಣಿಜ್ಯ ಬೆಳೆಯಾಗಿ ಬೆಳೆದಿರುವ ರೈತರು), ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳನ್ನು ಮಾರಾಟ ಮಾಡಲಾಗದೆ ಸಂಕಷ್ಟ ಅನುಭವಿಸಿರುವ ರೈತರು ಅರ್ಜಿ ನಮೂನೆಗಳನ್ನು ಇಲಾಖಾ ಕಚೇರಿಗಳಿಂದ ಪಡೆದು, ಭರ್ತಿ ಮಾಡಿ, ಪಹಣಿ, ಆಧಾರ್‌ನ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಸ್ವಯಂದೃಢಿಕರಣ ಹಾಗೂ ಮೊಬೈಲ್ ಸಂಖ್ಯೆಯ ವಿವರಗಳನ್ನು ಜೂ.15ರೊಳಗೆ, ತಾಲೂಕು ತೋಟಗಾರಿಕೆ ಇಲಾಖೆಯ ಕಚೇರಿಗೆ ಸಲ್ಲಿಸಬೇಕು. ಬಳಿಕ ಅರ್ಜಿದಾರರ ಸ್ಥಳ ಪರಿಶೀಲನೆಯನ್ನು ಜಂಟಿ ಪರಿಶೀಲನಾ ತಂಡದಿಂದ ಕೈಗೊಂಡು ನಿಯಮಾನುಸಾರ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗುವುದು.

ಪರಿಹಾರ ಪಾವತಿಸಲು ಇರುವ ಮಾನದಂಡಗಳು: 2020ನೇ ಮಾರ್ಚ್ 2ನೇ ವಾರದ ನಂತರ ಕಟಾಗೆ ಬಂದಿರುವ ಫಸಲಿಗೆ ಮಾತ್ರ ಪರಿಹಾರದನವನ್ನು ವಿತರಿಸಲಾಗುವುದು. ಈ ಬಗ್ಗೆ ರೈತರು ಸ್ವಯಂದೃಡೀಕರಣ/ಮುಚ್ಚಳಿಕೆ ನೀಡಬೇಕು. ಪರಿಹಾರ ಪಾವತಿಸುವ ರೈತರ ಹೆಸರಿನಲ್ಲಿ ಜಮೀನು ಹೊಂದಿರ ಬೇಕು. ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಸಲ್ಲಿಸಬೇಕು,. ಮಹಿಳಾ ಖಾತೆದಾರರಿದ್ದಲ್ಲಿ, ಮಹಿಳೆಯರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು. ಮಾರ್ಚ್ 4ನೇ ವಾರದ ನಂತರ ನಾಟಿ ಮಾಡಿದ ಕಲ್ಲಂಗಡಿ ಹಾಗೂ ಕರಬೂಜ ಬೆಳೆಗಳು ಪರಿಹಾರಕ್ಕೆ ಅರ್ಹರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ತೋಟಗಾರಿಕೆ ಉಪನಿರ್ದೇಶಕರು, ಉಡುಪಿ ಜಿಲ್ಲೆ: 0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ ತಾಲೂಕು: 0820-2522837, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕುಂದಾಪುರ ತಾಲೂಕು: 08254-230813, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಕಾರ್ಕಳ ತಾಲೂಕು: 08258-230288 ಇವರನ್ನು ಸಂಪರ್ಕಿಸುವಂತೆ ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News