ಮೋಜು ಮಸ್ತಿಯ ಅಡ್ಡೆಯಾದ ಕಾರ್ಕಳದ ಕ್ವಾರಂಟೈನ್ ಕೇಂದ್ರ: ಯುವ ಕಾಂಗ್ರೆಸ್ ಗಂಭೀರ ಆರೋಪ

Update: 2020-06-04 17:33 GMT

ಉಡುಪಿ, ಜೂ.4: ಜಿಲ್ಲೆಯ ಕಾರ್ಕಳ ಕ್ವಾರಂಟೈನ್ ಕೇಂದ್ರವೊಂದರಲ್ಲಿ ಯುವ ರಾಜಕಾರಣಿಗಳ ಹುಟ್ಟುಹ್ಬದ ಪಾರ್ಟಿಯೊಂದು ಆಯೋಜಿಸಲಾಗಿತ್ತು ಎಂದು ಆರೋಪಿಸಲಾಗಿದ್ದು, ಈ ಬಗ್ಗೆ ತೀವ್ರ ಅಕ್ರೋಶ ವ್ಯಕ್ತವಾಗುತ್ತಿದೆ. ಮಾತ್ರವಲ್ಲ ಕ್ವಾರಂಟೈನ್ ಕೇಂದ್ರಗಳು ಮೋಜು ಮಸ್ತಿಯ ತಾಣಗಳಾಗುತ್ತಿವೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಆರೋಪಿಸಿದ್ದಾರೆ.

ಕಾರ್ಕಳ ತಾಲೂಕಿನ ಶಾಲೆಯೊಂದರಲ್ಲಿನ ಕ್ವಾರಂಟೈನ್ ಕೇಂದ್ರದಲ್ಲಿ ಈ ಪಾರ್ಟಿ ಆಯೋಜನೆಗೊಂಡಿತ್ತು ಮತ್ತು ಇದರಲ್ಲಿ ಸ್ಥಳೀಯ ಜನ್ರತಿನಿಧಿಗಳು ಭಾಗಿಯಾಗಿದ್ದರು ಎಂದು ಅವರು ಆರೋಪಿಸಿದ್ದಾರೆ.

ಕಾರ್ಕಳ ಬಿಜೆಪಿ ಯುವ ಮೋರ್ಚಾ ಅದ್ಯಕ್ಷ ಕರುಣಾಕರ ಕೋಟ್ಯಾನ್, ಕಾಂತಾವರ ಪಂಚಾಯತ್ ಅದ್ಯಕ್ಷ ರಾಜೇಶ್ ಕೋಟ್ಯಾನ್, ಯುವ ಮೋರ್ಚಾ ಕಾರ್ಯದರ್ಶಿ ನವೀನ್ ಕಾಂತಾವರ ಕ್ವಾರಂಟೈನ್‌ನ ಭರ್ಜರಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಮುಂಬೈಯಿಂದ ಬಂದು ಕ್ವಾರಂಟೈನ್‌ನಲ್ಲಿರುವವರ ಜೊತೆಗೆ ಹುಟ್ಟುಹಬ್ಬ ಆಚರಣೆ ಮಾಡಿರುವ ಇವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಆಗ್ರಹಿಸಿದೆ. ಈ ಘಟನೆ ಮತ್ತೆ ಮರುಕಳಿಸಬಾರದು.ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News