ಮಂಗಳೂರು: ಕೋವಿಡ್ ನಿಂದ ರಕ್ಷಣೆಗಾಗಿ ಖಾಸಗಿ ಬಸ್ ಸಿಬ್ಬಂದಿಯಿಂದ ರಕ್ಷಾ ಕವಚ!
Update: 2020-06-05 04:37 GMT
ಮಂಗಳೂರು, ಜೂ.5: ನಗರದ ಕೆಲವು ಬಸ್ ಸಿಬ್ಬಂದಿ ಕೋವಿಡ್-19ನಿಂದ ರಕ್ಷಣೆಗಾಗಿ ರಕ್ಷಾ ಕವಚ ಧರಿಸಿ ಕರ್ತವ್ಯ ನಿರ್ವಹಿಸಲು ಮುಂದಾಗಿದ್ದಾರೆ.
ನಗರದ ಸ್ಟೇಟ್ ಬ್ಯಾಂಕ್ನಿಂದ ಶಕ್ತಿನಗರಕ್ಕೆ ತೆರಳುವ ರೂಟ್ ನಂಬ್ರ 6ಎ ಸಿಟಿ ಬಸ್ಸಿನ ನಿರ್ವಾಹಕರು ಕೊರೋನ ವೈರಸ್ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೋವಿಡ್ ರಕ್ಷಣಾ ಕವಚ ಅಳವಡಿಸಿಕೊಂಡಿದ್ದಾರೆ.
ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಮಿತಿ ಹೇರುವುದು ಮತ್ತು ಸುರಕ್ಷಿತ ಅಂತರ ಕಾಪಾಡಲು ಆದ್ಯತೆ ನೀಡಲು ಸರಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಬಸ್ಸಿನ ನಿರ್ವಾಹಕರು ಕೋವಿಡ್ ರಕ್ಷಣಾ ಕವಚ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಬಹುತೇಕ ಬಸ್ಸುಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿರುವ ಸಂದರ್ಭದಲ್ಲೇ ಬಸ್ಸಿನ ಸಿಬ್ಬಂದಿಯ ಮುಂಜಾಗ್ರತಾ ಕ್ರಮಕ್ಕೆ ಪ್ರಶಂಸೆ ವ್ಯಕ್ತವಾಗಿದೆ.