ವಿಟ್ಲ: ಪರಿಸರ ದಿನದ ಅಂಗವಾಗಿ ಡಿವೈಎಫ್‌ಐನಿಂದ ಸಸಿ ವಿತರಣೆ

Update: 2020-06-05 08:15 GMT

ವಿಟ್ಲ, ಜೂ.5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಡಿವೈಎಫ್‌ಐ ವಿಟ್ಲ ವಲಯ ಸಮಿತಿಯ ವತಿಯಿಂದ ಗಿಡಗಳ ವಿತರಣೆ ಕಾರ್ಯಕ್ರಮ ಡಿವೈಎಫ್‌ಐ ವಿಟ್ಲ ಕಚೇರಿಯಲ್ಲಿ ಶುಕ್ರವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಬರಹಗಾರ ಅಬ್ದುಲ್ ಖಾದರ್ ಕುಕ್ಕಾಜೆ ಮಾತನಾಡಿ, ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಗಿಡಗಳನ್ನು ನೆಡುವ ಮೂಲಕ ಮುಂದಿನ ತಲೆಮಾರಿಗೆ ನೈರ್ಮಲ್ಯಯುತವಾದ ಪರಿಸರ ಉಳಿಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಪುತ್ತೂರು ವಲಯ ಕಾರ್ಯದರ್ಶಿ ಇಶಾಕ್, ಡಿವೈಎಫ್‌ಐ ವಿಟ್ಲ ವಲಯ ಸಮಿತಿ ಮಾರ್ಗದರ್ಶಕರಾದ ಮುಹಮ್ಮದ್ ಇಕ್ಬಾಲ್ ಹಳೆಮನೆ, ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ ಉಪಸ್ಥಿತರಿದ್ದರು.

ಸಮಿತಿಯ ಮುಖಂಡರಾದ ಇರ್ಫಾನ್, ಒಕ್ಕೆತ್ತೂರು, ಸಹೀದ್ ಶೈನ್, ಸಲೀಂ ಮಲಿಕ್, ತಮೀಂ ಎಂ.ಕೆ. ಮುಂತಾದವರು ಉಪಸ್ಥಿತರಿದ್ದರು.

ವಿಟ್ಲ ವಲಯ ಕಾರ್ಯದರ್ಶಿ ಜಮೀಲ್ ಎಂ.ಕೆ. ಸ್ವಾಗತಿಸಿದರು. ಅಧ್ಯಕ್ಷ ನುಜುಂ ಅಳಿಕೆ ವಂದಿಸಿದರು 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News