ಕೂಡಿ ಬದುಕಿದರೆ ಸ್ವರ್ಗ, ಕೆಡವಿ ಬದುಕಿದರೆ ನರಕ: ವಿಶ್ವ ಪರಿಸರ ದಿನಕ್ಕೆ ಸಿದ್ದರಾಮಯ್ಯ ಶುಭ ಹಾರೈಕೆ

Update: 2020-06-05 16:32 GMT

ಬೆಂಗಳೂರು, ಜೂ. 5: 'ಪರಿಸರ ಎಂದರೆ ಮನುಷ್ಯನೊಬ್ಬನೇ ಅಲ್ಲ, ಮಣ್ಣು, ಗಾಳಿ, ಮರ, ನದಿ, ಗುಡ್ಡ, ಪ್ರಾಣಿ, ಪಕ್ಷಿ, ಹುಳು-ಹುಪ್ಪಟೆಯಾದಿಯಾಗಿ ಸಕಲ ಜೀವಾತ್ಮಗಳು ಸೇರಿಕೊಂಡಿರುವ ಕೂಡು ಕುಟುಂಬ' ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.

ಶುಕ್ರವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಟ್ವೀಟ್ ಮಾಡಿರುವ ಅವರು, `ಕೂಡಿ ಬದುಕಿದರೆ ಸ್ವರ್ಗ, ಕೆಡವಿ ಬದುಕಿದರೆ ನರಕ. ನಾಡಿನ ಸಮಸ್ತ ಜನತೆಗೆ ಪರಿಸರ ದಿನಾಚರಣೆ ಶುಭಾಶಯಗಳು ಎಂದು ಹಾರೈಸಿದ್ದಾರೆ.

ಪರಿಸರವನ್ನು ಮಗುವಿನಂತೆ ರಕ್ಷಿಸಿ, ಉಳಿಸಿ-ಬೆಳಸಿ, ತಾಯಿಯಂತೆ ಪೂಜಿಸುವುದು ನಮ್ಮ ಕರ್ತವ್ಯವಾಗಿದೆ. ಪರಿಸರ ಕಾಳಜಿಯ ಪ್ರಜ್ಞೆಯು ಪ್ರತಿಯೊಬ್ಬರಲ್ಲಿ ಜಾಗೃತವಾಗಬೇಕು. ಎಲ್ಲರಿಗೂ ವಿಶ್ವ  ಪರಿಸರ ದಿನದ ಶುಭಾಶಯಗಳು'

-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News