ಉಡುಪಿ: ಜಿಲ್ಲಾ ಆರೋಗ್ಯ ಇಲಾಖೆಯಿಂದ ವಿಶ್ವ ಪರಿಸರ ದಿನಾಚರಣೆ

Update: 2020-06-05 16:49 GMT

ಉಡುಪಿ, ಜೂ.5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೀವ ವೈವಿಧ್ಯತೆ ಎಂಬ ಘೋಷಣೆಯೊಂದಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ‌ಚಂದ್ರ ಸೂಡಾ ಗಿಡ ನೆಟ್ಟು, ಮುಂದಿನ ಪೀಳಿಗೆಗಾಗಿ ಪರಿಸರವನ್ನು ರಕ್ಷಿಸಿ, ಪೋಷಿಸುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀರಾಮರಾವ್, ಆರ್‌ಸಿಹೆಚ್ ಅಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾ ಧಿಕಾರಿ ಡಾ.ಚಿದಾನಂದ ಸಂಜು, ಕೋವಿಡ್ ಕಾಲ್‌ಸೆಂಟರ್ ಅಧಿಕಾರಿ ಡಾ. ಪ್ರೇಮಾನಂದ್, ಮನೋವೈದ್ಯ ಡಾ.ಮಾನಸ್, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಾಬಾಯಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರೀತಮ್ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News